ವಿಷಯಕ್ಕೆ ಹೋಗಿ

ಅಮಾಯಕ ನೈಜ ಕಥೆ ( ಸಂಚಿಕೆ-೦೪)

ತಂದೆ, ತಾಯಿಯ ಅಗಲಿಕೆ..
ಗಂಡನ ಅಗಲಿಕೆ..
ಖಾಯಿಲೆಯಿಂದ ಸತ್ತು ಹೋದ ತನ್ನ ಐದಾರು ಕುಡಿಗಳು...
ತಮ್ಮನೊಂದಿಗೆ ಮನಸ್ತಾಪ.. ಇದೀಗ, ಮನೆಗೆ ಗಂಡು ದಿಕ್ಕಾಗಿದ್ದ  ತನ್ನ ಜೀವದಂತಿದ್ದ ಮಗ, ಜೀವಚ್ಛವದಂತೆ ಮಲಗಿದ್ದಾನೆ.

 ಮರುದೇವಿ ಅವರಿಗೆ ತಾನು ಜೀವನದುದ್ದಕ್ಕೂ ನೋವನ್ನೇ ಅನುಭವಿಸಲು ಹೊಟ್ಟಿದವಳೇ ಎಂದು ಬಹಳ ದುಃಖ್ಖವಾಗುತ್ತಿತ್ತು.

ಮಗ "ಶಾಂತಿರಾಜ"ನ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿಲ್ಲ.
ತಾಯಿ ಇದ್ದ ದೇವರಿಗೆಲ್ಲ ಹರಕೆ ಹೊತ್ತುಕೊಂಡರು. ಬೇರೆ ಬೇರೆ ವೈದ್ಯರುಗಳನ್ನು ಕರೆ ತಂದು ಚಿಕೆತ್ಸೆ ಕೊಡಿಸಿದರು. ಆದರೆ ಅದ್ಯಾವುದು ಪರಿಣಾಮ ಬೀರಲಿಲ್ಲ. ಮಗನ ಅರೋಗ್ಯ ಸುಧಾರಿಸಲು ಇಲ್ಲ. ಆತನ ದೇಹ ಚಿಕಿತ್ಸೆಗೆ ಸ್ಪಂದಿಸಲೂ ಇಲ್ಲ.  ಇದರಿಂದಾಗಿ ತಾಯಿ ಮತ್ತು ತಂಗಿಯಂದಿರು ಸದಾ  ಚಿಂತೆಯಲ್ಲಿ ಇರುತ್ತಿದ್ದರು.
ಮಗನನ್ನು ದೂರದ ಪಟ್ಟಣಕ್ಕೆ ಕರೆದೊಯ್ದು ಒಳ್ಳೆ ಚಿಕಿತ್ಸೆ ಕೊಡಿಸಿದರೆ ಚೇತರಿಸಬಹುದು ಎಂಬ ಭರವಸೆ ಇತ್ತು. ಹೇಗಾದರೂ ಮಾಡಿ ಮಗನಿಗೆ ಒಳ್ಳೆ ಚಿಕಿತ್ಸೆ ಕೊಡಿಸಬೇಕು.
ಅದಕ್ಕಾಗಿ ಹಣ ಹೊಂದಿಸಿ ಕೊಳ್ಳಬೇಕು, ಎಂದು ಯೋಚಿಸುತ್ತಿದ್ದರು.  

ಹೀಗೆ ಕೆಲವು ದಿನಗಳು ಕಳೆದವು.
ಮರುದಿನ ಮಗನನ್ನು ಚಿಕಿತ್ಸೆಗಾಗಿ ಪಟ್ಟಣಕ್ಕೆ ಕರೆದೊಯ್ಯುವುದು ಎಂದು ನಿರ್ಧರಿಸಿದರು. ಕರೆದೊಯ್ಯಲು ಎತ್ತಿನ ಗಾಡಿಯನ್ನು ಹೇಳಿದ್ದರು.

ಮರುದಿನ ಮುಂಜಾನೆಯ ಸಮಯ, ಮಗ ಶಾಂತಿ ಮಲಗಿದ್ದಲ್ಲಿಂದ ಏನೋ ತೊದಲುತ್ತಿದ್ದ, ಒಮ್ಮೆ ಜೋರಾಗಿ ಅಮ್ಮ ಎಂದು ನರಳಿದ 
ತಾಯಿ ಓಡಿ ಬಂದು ಮಗನ ತಲೆಯನ್ನು ತನ್ನ ಮಡಿಲಿನಲ್ಲಿ ಇರಿಸಿಕೊಂಡರು.  ಸ್ವಲ್ಪ ನೀರು ಕುಡಿಸಿದರು. ಮಗ ಜೋರಾಗಿ ಉಸಿರು ಎಳೆದು ಕೊಂಡು ಉಸಿರು ಬಿಟ್ಟ.
ಆತನ ಪ್ರಾಣ ಪಕ್ಷಿ ಹಾರಿ ಹೋಯಿತು.
ತಾಯಿಯ ಮತ್ತು ತಂಗಿಯರ ಆಕ್ರಂದನ ಮುಗಿಲು ಮುಟ್ಟಿತು.

(ಮುಂದುವರಿಯುತ್ತದೆ)

ಕಾಮೆಂಟ್‌ಗಳು

Popular Posts

ಬಾಳು ಮತ್ತು ಗೋಳು

ಸಾತ್ವಿಕ ಜೀವನದ ದಾರಿಯಲಿ ನಡೆಯಲಾರದೆ ಎಡವಿದವನು ಅಲೆಮಾರಿಯೋ...! ಹಣೆಬರಹವನು ಗೀಚಿಬಿಟ್ಟ ಭಗವಂತನು ಏನನ್ನೂ ಅರಿಯದ ಸೋಮಾರಿಯೋ....! ಜನಮ ನೀಡಿ ತಿದ್ದಿ ತೀಡಿ, ಸನ್ಮಾರ್ಗದಲಿ ನಡೆಯಲು ಪ್ರೇರೇಪಿಸಿದವರಿಗೆ ಅಭಾರಿಯೋ.!  ಮೌನವಾಗಿದ್ದು, ಜೀವಚ್ಛವದಂತಿರುವ, ಮುಗ್ದ ಮನಸ್ಸಿನ ಮೇಲೆ ದಬ್ಬಾಳಿಕೆಯ ಸವಾರಿಯೋ...! ಅಂಬೆಗಾಲಲಿ ಕಲಿತು, ದಾಪುಗಾಲಲಿ ನಡೆದು , ಕೋಲೂರಿ ನಡೆವ ತನಕ, ಬಾಳೆಂಬುದು ರಹದಾರಿಯೋ...!                                                        -ಮಿಥುನ್ ಜೈನ್

ಸರಳತೆ ಸೌಹಾರ್ದತೆ - ಮನುಜ ಕುಲಂ ತಾನೊಂದೆ ವಲಂ

ಮನುಜ ಕುಲಂ ತಾನೊಂದೆ ವಲಂ (ಸರಳ ಸೌಹಾರ್ದತೆ)  ಧರ್ಮಗಳೆಲ್ಲವು  ಒಳಿತನು ನೆನೆದರೆ ಜನಗಳ ಮದ್ಯೆ ದ್ವೇಷವೇಕೆ  !  ?  ಕರ್ಮ ಕಾಯಕವ ಮನವ ಬಯಸಿದರೆ ಪರರದು ಎಂಬ ಹಂಗೇಕೆ  ! ?  !ಪ! ಮಂದಿಯ ಮದ್ಯೆ ಮುನಿಸಿರದಿದ್ದರೆ  ಜಾತಿ ಜಾತಿ ನಡು ಬಿರುಕೇಕೆ  !  ?  ಒಂದಾಗಿದ್ದರೆ, ಎಲ್ಲಾ ಪಂಗಡಗಳು. ಏಕಿದೆ ನಡು ನಡು ಗೋಡೆಗಳು   ! ಪ! ಸಾರಿದರಲ್ಲವೇ  ಕವಿ ಕುವೆಂಪು. ವಿಶ್ವ ಮಾನವತೆಯ ಕಂಪು.  !  ಒಂದೇ,,ಜಾತಿ ಮತ, ದೇವರು ಎಂದರು.  ಗುರು ಶ್ರೀ ನಾರಾಯಣರು.   ! ಪ! ಇದ ಅರಿತರೆ ಬದುಕಿನ ಮಾರ್ಗ. ಬಾಳೊಂದು ನೆಮ್ಮದಿಯ ಸ್ವರ್ಗ. ! ಆದಿಕವಿ ಪಂಪನ ಕನ್ನಡ ಹೊನ್ನುಡಿ ಅಚಲ. ಮನುಜ ಕುಲ, ತಾನೊಂದೆ ವಲ  !ಪ!    ✍️ಎನ್. ಮಿಥುನ್ ಜೈನ್

ಅಮಾಯಕ ನೈಜ ಕಥೆ ( ಸಂಚಿಕೆ-೧೦)

 ಶಾಂತಿರಾಜನನ್ನು ಕಟ್ಟಿ ಹಾಕಿದ ಗೋಣಿ ಚೀಲವನ್ನು ಬಿಡಿಸಿ ನೋಡಿದಾಗ.. ಆ ದೃಶ್ಯ ನೋಡಿದ ಮನೆ ಮಂದಿಯೆಲ್ಲ ಒಮ್ಮೆಲೆ ಗಾಬರಿಗೊಂಡರು ಕೆಲವರು ಭಯದಿಂದ ಕಿರುಚಾಡಿದರು. ಶಾಂತಿರಾಜನ ದೇಹ ಮರುಗಟ್ಟಿ ಹೋಗಿತ್ತು. ಕೈ ಕಾಲುಗಳು ಜಡ್ಡುಗಟ್ಟಿ ಹೋಗಿತ್ತು.  ನರಕವೇದನೆಯನ್ನು ತಡೆಯಲಾರದೆ  ಅಲ್ಲಿಯೇ ಮಲ ಮೂತ್ರ ವಿಸರ್ಜನೆ ಆಗಿದೆ. ಯಾವುದೇ ಮಿಸುಕಾಟ ಇಲ್ಲ,   ಅವರಲ್ಲಿ ಯಾರೋ ಒಬ್ಬರು,  ಮೂಗಿನ ಬಳಿ ಕೈ ಹಿಡಿದರು, ಉಸಿರಾಡುತ್ತಿದ್ದಾನೆ.  ಮೂರ್ಛೆ ಹೋಗಿ ತುಂಬಾ ಹೊತ್ತಾಗಿದೆ. ಆದರೆ ಪ್ರಾಣ ಹೋಗಿಲ್ಲ.  ಮುಖಕ್ಕೆ ನೀರು ಚಿಮುಕಿಸಿದರು, ಆದರೆ ಪ್ರಜ್ಞೆ ಬರುತ್ತಿಲ್ಲ. ಹೀಗೆ ಕಮಲಕ್ಕ ನಡೆದ ಘಟನೆಯನ್ನು ವಿವರಿಸುತ್ತಿದ್ದಾರೆ,  ತನ್ನ ಕರುಳ ಕುಡಿಯ ಪ್ರಾಣ ವೇದನೆಯ ಕಥೆಯನ್ನು ಕಮಲಕ್ಕನ ಬಾಯಿಯಿಂದ ಕೇಳುತ್ತಿದ್ದಾಗ ಮರುದೇವಿಯವರು ಕೋಪ ಮತ್ತು ದುಃಖ್ಖದಿಂದ ಕುದಿಯುತ್ತಿದ್ದಾರೆ. ಕಮಲಕ್ಕ ಮತ್ತೆ ಆ ದುಃಖ್ಖದ ಕಥೆ ಯನ್ನು ಮುಂದುವರೆಸಿದರು. ಪುಂಡ ಯುವಕರ ಅಹಂಕಾರವೆಲ್ಲ ಇಳಿದುಹೋಗಿದೆ,  ಸಂಪೂರ್ಣ ಬೆವತು ಹೋಗಿದ್ದಾರೆ  ತಾವು ಮಾಡಿದ ಮಹಾ ಅಪರಾಧದ ಅರಿವಾಗಿ, ಬಹಳವಾಗಿ ನೊಂದು ಕೊಂಡರು. ಕೊನೆಗೆ ಯುವಕರೆಲ್ಲ ಒಂದು ನಿರ್ಧಾರಕ್ಕೆ ಬಂದರು. ಹೇಗಾದರು ಮಾಡಿ ಶಾಂತಿರಾಜನನ್ನು ಬದುಕಿಸ ಬೇಕು. ಕೂಡಲೇ,  ಯುವಕರೆಲ್ಲ ಸೇರಿ 'ಶಾಂತಿ'ಯನ್ನು ಭಾವಿ ಕಟ್ಟೆಯ ಬಳಿ ಕುಳ್ಳಿರಿಸಿ ತಲೆಗೆ ಕೊಡಪಾನದಿಂದ ನೀರ...